ವಾಲ್ಮೀಕಿಗಿರಿಸಂಭೂತವಾಗಿ ರಾಮಸಾಗರವನ್ನು ಸೇರಿದ ರಾಮಾಯಣವೇ ಒಂದು ಮಹಾನದಿ. ಅದು ಸಾವಿರಾರು ಕವಿಗಳ ಪ್ರತಿಭೆಗೆ ಸ್ಫೂರ್ತಿದಾಯಿನಿಯಾಗಿ ಅನಂತಕಾಲದಿಂದಲೂ ಈ ಭೂಮಿಯನ್ನು ಪಾವನಗೊಳಿಸುತ್ತಿರುವ ಪುಣ್ಯಗಂಗೆ. ಅಂದಿನಿಂದ ಇಂದಿನವರೆಗೆ ರಾಮಾಯಣವು ಸಹಸ್ರ ಸಹಸ್ರ ಕವಿಗಳಿಂದ ಸಾವಿರ ಸಾವಿರ ಬಾರಿ ಪುನಃ ಪುನಃ ಬರೆಯಲ್ಪಟ್ಟಿದೆ. ’ತಿಣುಕಿದನು ಫಣಿರಾಯ ರಾಮಾಯಣದ ಕವಿಭಾರದಲಿ’ ಎಂಬಂತೆ ಅದೆಷ್ಟೇ ರಾಮಾಯಣಗಳಿದ್ದರೂ ಪುರ್ವೋತ್ತರದ ವಿಚಾರಮಾಡುವ ಕೆಲಸ ವಿದ್ವಾಂಸನಿಗೆ ಬಂದರೆ ಎಲ್ಲದಕ್ಕೂ ಮೂಲವಾಗುವುದು ವಾಲ್ಮೀಕಿ ರಾಮಾಯಣವೇ. ಪ್ರಚಲಿತ ಮೂಲ ವಾಲ್ಮೀಕಿ ರಾಮಾಯಣದಲ್ಲಿ ಕೆಲವೊಂದು ಭಾಗಗಳು ಪ್ರಕ್ಷಿಪ್ತವಾದರೂ ರಾಮಾಯಣ ಮತ್ತು ವಾಲ್ಮೀಕಿಯ ವೃತ್ತಾಂತದ ಬಗ್ಗೆ ತಿಳಿಯಲು ಅವೇ ಮೂಲ ಆಧಾರ. ಅಗಸನ ಮಾತು ಕೇಳಿ ಕಾಡಿಗಟ್ಟಲ್ಪಟ್ಟ ಸೀತೆಗೆ ಆಶ್ರಯಕೊಟ್ಟು, ಲವಕುಶರನ್ನು ಸಾಕಿ ಅವರಿಗೆ ರಾಮಾಯಣವನ್ನು ಕಲಿಸಿ ಮತ್ತೆ ಸೀತೆಯು ರಾಮನನ್ನು ಯಾಗಮಂಟಪದಲ್ಲಿ ಸಂಧಿಸುವಂತೆ ಮಾಡಿದ ಕೀರ್ತಿ ವಾಲ್ಮೀಕಿಯದ್ದೆಂದು ಉತ್ತರ ರಾಮಾಯಣ ತಿಳಿಸುತ್ತದೆ. ಹೀಗೆ ವಾಲ್ಮೀಕಿಯು ರಾಮಾಯಣವನ್ನು ಬರೆದ ಕವಿಯಷ್ಟೇ ಅಲ್ಲ, ರಾಮಾಯಣದ ಪ್ರಮುಖ ಪಾತ್ರಧಾರಿಯೂ ಹೌದು. ಅಯೋಧ್ಯಾ ಕಾಂಡದ ಸರ್ಗವೊಂದರಲ್ಲಿ ರಾಮ, ಲಕ್ಷ್ಮಣ, ಸೀತೆಯರು ಚಿತ್ರಕೂಟದ ಸಮೀಪ ವಾಲ್ಮೀಕಿಯನ್ನು ಕಂಡು ವಂದಿಸಿದರೆಂದಿದೆ. ಬಾಲಕಾಂಡದ ಕ್ರೌಂಚ ಪ್ರಸಂಗದಿಂದ ವಾಲ್ಮೀಕಿಯ ಆಶ್ರಮ ತಮಸಾನದಿ ತೀರದಲ್ಲಿತ್ತೆಂದು ತಿಳಿಯುತ್ತದೆ. ಈ ವಾಲ್ಮೀಕಿ ಬೇಡಕುಲದವನೆಂಬ ರೂಢಿ ನಮ್ಮಲ್ಲಿ ಬಹುಮಟ್ಟಿಗೆ ಪ್ರಚಾರದಲ್ಲಿದೆ. ನಮ್ಮ ಹಿಂದಿನ ’ಗನ’ ಸರ್ಕಾರವು ಸಿದ್ರಾಮಯ್ಯನವರಿಂದ ಕುರುಬರ ಓಟು ಕದಿಯಲು ’ಕನಕ’ಜಯಂತಿಯಂದೂ, ಶ್ರೀರಾಮುಲುವನ್ನು ಸಂತೈಸಲು ’ವಾಲ್ಮೀಕಿ’ ಜಯಂತಿಯಂದೂ ರಜೆ ಘೋಷಿಸಿದ್ದು ಎಲ್ಲರಿಗೂ ತಿಳಿದ ವಿಚಾರವೇ. ಇನ್ನು ಒಕ್ಕಲಿಗರಿಗಾಗಿ ಕೆಂಪೇಗೌಡ ಜಯಂತಿಯಂದೂ, ಮುಸ್ಲೀಮರಿಗಾಗಿ ಟಿಪ್ಪುಸುಲ್ತಾನ್ ಜಯಂತಿಗೂ ಹೀಗೆ ಜಾತಿಗೊಂದು ಜಯಂತಿಗಳಿಗೆ ರಜೆ ಘೋಷಿಸಿ ಸೆಕ್ಯುಲರಿಸಮ್ಮನ್ನು ಎತ್ತಿಹಿಡಿಯಲು ತುದಿಗಾಲಲ್ಲಿ ನಿಂತಿದೆ. ಪ್ರಚಲಿತವೂ, ಪ್ರಚಾರವೂ ಏನೇ ಇದ್ದರೂ ವಾಲ್ಮೀಕಿ ಬೇಡನಾಗಿದ್ದನೇ? ಎಂಬ ಸತ್ಯಾಸತ್ಯತೆಯನ್ನು ಸ್ವಲ್ಪ ವಿಚಾರಿಸೋಣ.
ಈ ಕಥೆ ಮೊದಲು ದೊರಕುವುದು ಆಧ್ಯಾತ್ಮ ರಾಮಾಯಣದಲ್ಲಿ. ಚಿತ್ರಕೂಟದ ಸಮೀಪ ವಾಲ್ಮೀಕಿ ದರ್ಶನಕ್ಕೆ ಬಂದ ರಾಮನಿಗೆ ವಾಲ್ಮೀಕಿಯೇ ಹೇಳುವುದು:
ಅಹಂ ಪುರಾ ಕಿರಾತೇಷು ಕಿರಾತೈಃ ಸಹ ವರ್ಧಿತಃ |
ಜನ್ಮಮಾತ್ರದ್ವಿಜತ್ವಂ ಮೇ ಶೂದ್ರಾಚಾರರತಃ ಸದಾ ||
ನಾನು ಬೆಳೆದದ್ದೆಲ್ಲ ಕಿರಾತರ ನಡುವೆ, ಶೂದ್ರಾಚಾರದಲ್ಲೇ ನಾನಿದ್ದೆ. ಕೇವಲ ಜನ್ಮದಿಂದ ಮಾತ್ರ ನಾನು ದ್ವಿಜನಾಗಿದ್ದೆ.(ಗಮನಿಸಿ ಇಲ್ಲಿ ಕಿರಾತನೆಂದಿದೆಯೇ ಹೊರತೂ ಬೇಡನೆಂದಲ್ಲ)
ಅನಂತರ ಕಳ್ಳರ ಸಹವಾಸದಿಂದ ಕಳ್ಳನಾದೆ. ಒಮ್ಮೆ ಸಪ್ತರ್ಷಿಗಳ ವಸ್ತುಗಳನ್ನು ಅಪಹರಿಸಲು ಹೊರಟಾಗ ಅವರೆಂದರು "ನೀನು ಯಾವ ಹೆಂಡತಿ ಮಕ್ಕಳಿಗಾಗಿ ಇಷ್ಟು ಪಾಪಕಾರ್ಯಗಳನ್ನು ಮಾಡುತ್ತಿರುವೆಯೋ ಅದರಲ್ಲಿಯೂ ಅವರು ಭಾಗಿಗಳಾಗುವರೋ ಕೇಳಿಕೊಂಡು ಬಾ" ಎಂದು. ನಾನು ಹಾಗೆ ಕೇಳಿದಾಗ ಯಾರೂ ಭಾಗಿಗಳಾಗಲು ಒಪ್ಪಲಿಲ್ಲ. ಅದರಿಂದ ವೈರಾಗ್ಯವುಂಟಾಯಿತು. ಅವರು ಅಲ್ಲಿಯೇ ಜಪಮಾಡುವಂತೆ ’ಮರಾ’ ಎಂಬ ಮಂತ್ರೋಪದೇಶ ಮಾಡಿದರು.
’ಏಕಾಗ್ರಮನಸಾತ್ರೈವ ಮರೇತಿ ಜಪ ಸರ್ವದಾ’
ನಾನು ಹಾಗೆಯೇ ಮಾಡುತ್ತಿರಲು ನನ್ನಮೇಲೆ ಹುತ್ತ ಬೆಳೆಯಿತು. ವರ್ಷಗಳ ನಂತರ ಋಷಿಗಳು ಬಂದು ನನ್ನನ್ನು ಹೊರಬರುವಂತೆ ಕರೆದರು.
ವಲ್ಮೀಕಾನ್ನಿರ್ಗತಶ್ಚಾಹಂ ನೀಹಾರಾದಿವ ಭಾಸ್ಕರಃ |
ಮಾಮಪ್ಯಾಹುರ್ಮುನಿಗಣಾಃ ವಾಲ್ಮೀಕಿಸ್ತ್ವಂ ಮುನೀಶ್ವರಃ ||
ವಲ್ಮೀಕದಿಂದ ಹೊರಬಂದುದರಿಂದ ಮುಂದೆ ಈತ ವಾಲ್ಮೀಕಿಯೆಂದೇ ಹೆಸರಾದ. ಅಲ್ಲದೇ ವರುಣನು(ಪ್ರಚೇತ) ಮಳೆಯನ್ನು ಸುರಿಸಿ ಹುತ್ತವನ್ನು ಕರಿಗಿಸಿದ್ದರಿಂದ ಪ್ರಾಚೇತಸನೆಂಬ ಹೆಸರೂ ಬಂದಿತು. ಇದಕ್ಕೂ ಮೊದಲು ಆತನಿಗೆ ಯಾವ ಹೆಸರಿತ್ತೆಂಬುದು ರಾಮಾಯಣದಲ್ಲೆಲ್ಲೂ ಉಲ್ಲೇಖವಿಲ್ಲ.
ಇದೇ ಕಥೆಯು ಮುಂದೆ ಆನಂದ ರಾಮಾಯಣದಲ್ಲೂ ಇದೆ. ಇದಕ್ಕೆ ಪುಷ್ಟಿಕೊಡುವ ವಿಚಾರ ಮಹಾಭಾರತದ ಅನುಶಾಸನ ಪರ್ವದಲ್ಲೂ ಕಂಡುಬರುತ್ತದೆ. ಅಲ್ಲಿ ಯುಧಿಷ್ಠಿರನಿಗೆ ವಾಲ್ಮೀಕಿಯು ಹೇಳುತ್ತಾನೆ.
ವಾಲ್ಮೀಕಿಶ್ಚಾಹ ಭಗವಾನ್ ಯುಧಿಷ್ಠಿರಮಿದಂ ವಚಃ |
ವಿವಾದೇ ಸಾಗ್ನಿಮುನಿಭಿರ್ಬ್ರಹ್ಮಘ್ನೋ ವೈ ಭವಾನಿತಿ
ಉಕ್ತಃ ಕ್ಷಣೇನ ಚಾವಿಷ್ಟಸ್ತೇನಾಧರ್ಮೇಣ ಭಾರತ |
ಸೋಽಹಮೀಶಾನಮನಘಂ ಅಮೋಘಂ ಶರಣಂ ಗತಃ ||
ಮುಕ್ತಶ್ಚಾಸ್ಮಿತತೋ ಪಾಪೈಃ
"ಅಗ್ನಿಪೂಜಕರಾದ ಮುನಿಗಳೊಡನೆ ನಾನು ವಿವಾದ ಮಾಡಿದ್ದರಿಂದ ನೀನು ಬ್ರಹ್ಮಘ್ನನೆಂದುಬಿಟ್ಟರು. ಕೂಡಲೇ ನಾನು ಅಧರ್ಮಿಷ್ಟನಾದೆ. ಕಡೆಗೆ ಈಶ್ವರನನ್ನು ಶರಣುಹೋಗಿ ಪಾಪಮುಕ್ತನಾದೆ."
ಅಶ್ವಘೋಷನ ಬುದ್ಧಚರಿತ್ರೆಯಲ್ಲೂ ವಾಲ್ಮೀಕಿಯ ವೃತ್ತಾಂತವಿದೆ. ಅಲ್ಲಿ ವಾಲ್ಮೀಕಿಯನ್ನು ಚ್ಯವನ ಮಹರ್ಷಿಯ ಮಗನೆಂದಿದೆ.
’ವಾಲ್ಮೀಕಿರಾದೌ ಚ ಸಸರ್ಜ ಪದ್ಯಂ ಜಗ್ರಂಥಯನ್ನ ಚ್ಯವನೋ ಮಹರ್ಷಿಃ ’
ಈ ಚ್ಯವನನು ಭೃಗುವಿನ ಮಗ.
’ಭೃಗೋಮಹರ್ಷೇಃ ಪುತ್ರೋಽಭೂತ್ ಚ್ಯವನೋ ನಾಮ ಭಾರ್ಗವಃ’
ಭಾರ್ಗವನಾದ ವಾಲ್ಮೀಕಿಯೇ ರಾಮಚರಿತೆಯನ್ನು ಬರೆದವನೆಂದು ಶಾಂತಿಪರ್ವದಲ್ಲಿ ಸ್ಪಷ್ಟ ಉಲ್ಲೇಖವಿದೆ.
ಶ್ಲೋಕಶ್ಚಾಯಂ ಪುರಾಗೀತೋ ಭಾರ್ಗವೇನ ಮಹಾತ್ಮನಾ |
ಆಖ್ಯಾತೇ ರಾಮಚರಿತೇ ನೃಪಂತಿ ಪ್ರತಿ ಭಾರತ ||
ಸ್ವತಃ ರಾಮಾಯಣ, ಮಹಾಭಾರತಗಳಲ್ಲೇ ವಾಲ್ಮೀಕಿಯು ಬ್ರಾಹ್ಮಣನೆಂದಿದೆಯೇ ಹೊರತೂ ಬೇಡನೆಂದಲ್ಲ. ಆದರೆ ಕೆಲವು ಕಾಲ ಶೂದ್ರಾಚಾರ ನಿರತನಾಗಿದ್ದರೂ ಇರಬಹುದು.
ರಾಮಾಯಣದ ಹುಟ್ಟಿಗೆ ಕಾರಣವೆನಿಕೊಂಡ ’ಮಾನಿಷಾದ’ ಶ್ಲೋಕವನ್ನೇ ಗಮನಿಸಿ. ಇದು ಛಂದಸ್ಸಿನ ದೃಷ್ಟಿಯಿಂದ ನಿರ್ದುಷ್ಟವೆನಿಸಿದರೂ, ಅರ್ಥದ ದೃಷ್ಟಿಯಿಂದ ಅಪೂರ್ವ ಮಹತ್ವದ್ದೆಂದೇನೂ ಭಾಸವಾಗುವುದಿಲ್ಲ. ಕೆಲ ವ್ಯಾಖ್ಯಾನಕಾರರು ’ಮಾ’ ಎಂದರೆ ಲಕ್ಷ್ಮಿಯೆಂದೂ, ಮಾನಿಷಾದ ಎಂದರೆ ಲಕ್ಷ್ಮಿನಿವಾಸನಾದ ವಿಷ್ಣುವೆಂದೂ ಬಗೆಬಗೆಯ ಅರ್ಥಗಳನ್ನು ತೋರಿಸಿ ರಾಮಾಯಣಕ್ಕೆ ಮಂಗಳಶ್ಲೋಕವೆನಿಸುವ ಔಚಿತ್ಯ ಅದರಲ್ಲುಂಟೆಂದು ವಿವರಣೆ ನೀಡಿದ್ದಾರೆ. ಇದು ಪಂಡಿತರ ವ್ಯಾಖ್ಯಾನಕೌಶಲವೇ ಹೊರತೂ ಮತ್ತೇನೂ ಅಲ್ಲ. ಕ್ರೌಂಚ ಪಕ್ಷಿಯೊಂದನ್ನು ನಿಷಾದನೊಬ್ಬನು ಕೊಂದು ಕೆಡಹುತ್ತಾನೆ. ನೆಲಕ್ಕೆ ಬಿದ್ದು ಹೊರಳಾಡಿ ಸಾಯುತ್ತಿರುವ ಅದನ್ನು ಕಂಡ ವಾಲ್ಮೀಕಿಯ ಬಾಯಿಂದ ಹೊರಬಂದ ಶ್ಲೋಕವಿದು. ಪಕ್ಷಿಯನ್ನು ಕೊಂದದ್ದಕ್ಕಾಗಿ ವಾಲ್ಮೀಕಿ ನಿಷಾಧನನ್ನು ಶಪಿಸುತ್ತಾನೆ. ಬೇಟೆಯಾಡುವುದು ಬೇಡನ ಸಹಜ ಧರ್ಮ. ವಾಲ್ಮೀಕಿ ಮೂಲತಃ ಬೇಡನೇ ಆಗಿದ್ದಲ್ಲಿ ಹಕ್ಕಿಯನ್ನು ಕೊಂದವನೊಬ್ಬನನ್ನು ಹೀಗೆ ಶಪಿಸಲು ಸಾಧ್ಯವೇ ಇರುತ್ತಿರಲಿಲ್ಲ.
ರಾಜಸ್ಥಾನ, ಪಂಜಾಬ್, ಗುಜರಾತಿನಲ್ಲಿ ಬಹುಸಂಖ್ಯೆಯಲ್ಲಿರುವ ಈಗಿನ ವಾಲ್ಮೀಕಿ ಸಮುದಾಯದವರಿಗೆ ಆ ಹೆಸರು ಬ್ರಿಟಿಷರ ಕಾಲದಲ್ಲಿ ಹೇಗೆ ಬಂತೆಂಬ ವಿವರಣೆಗೆ ಪಂಡಿತ ಅಮಿತ್ಚಂದ ಶರ್ಮಾರ ’’ಬಾಲ್ಮೀಕಿ ಪ್ರಕಾಶ್’ ಎಂಬ ಹಿಂದಿ ಹೊತ್ತಿಗೆಯನ್ನು ಗಮನಿಸಿ.
ಈ ಕಥೆ ಮೊದಲು ದೊರಕುವುದು ಆಧ್ಯಾತ್ಮ ರಾಮಾಯಣದಲ್ಲಿ. ಚಿತ್ರಕೂಟದ ಸಮೀಪ ವಾಲ್ಮೀಕಿ ದರ್ಶನಕ್ಕೆ ಬಂದ ರಾಮನಿಗೆ ವಾಲ್ಮೀಕಿಯೇ ಹೇಳುವುದು:
ಅಹಂ ಪುರಾ ಕಿರಾತೇಷು ಕಿರಾತೈಃ ಸಹ ವರ್ಧಿತಃ |
ಜನ್ಮಮಾತ್ರದ್ವಿಜತ್ವಂ ಮೇ ಶೂದ್ರಾಚಾರರತಃ ಸದಾ ||
ನಾನು ಬೆಳೆದದ್ದೆಲ್ಲ ಕಿರಾತರ ನಡುವೆ, ಶೂದ್ರಾಚಾರದಲ್ಲೇ ನಾನಿದ್ದೆ. ಕೇವಲ ಜನ್ಮದಿಂದ ಮಾತ್ರ ನಾನು ದ್ವಿಜನಾಗಿದ್ದೆ.(ಗಮನಿಸಿ ಇಲ್ಲಿ ಕಿರಾತನೆಂದಿದೆಯೇ ಹೊರತೂ ಬೇಡನೆಂದಲ್ಲ)
ಅನಂತರ ಕಳ್ಳರ ಸಹವಾಸದಿಂದ ಕಳ್ಳನಾದೆ. ಒಮ್ಮೆ ಸಪ್ತರ್ಷಿಗಳ ವಸ್ತುಗಳನ್ನು ಅಪಹರಿಸಲು ಹೊರಟಾಗ ಅವರೆಂದರು "ನೀನು ಯಾವ ಹೆಂಡತಿ ಮಕ್ಕಳಿಗಾಗಿ ಇಷ್ಟು ಪಾಪಕಾರ್ಯಗಳನ್ನು ಮಾಡುತ್ತಿರುವೆಯೋ ಅದರಲ್ಲಿಯೂ ಅವರು ಭಾಗಿಗಳಾಗುವರೋ ಕೇಳಿಕೊಂಡು ಬಾ" ಎಂದು. ನಾನು ಹಾಗೆ ಕೇಳಿದಾಗ ಯಾರೂ ಭಾಗಿಗಳಾಗಲು ಒಪ್ಪಲಿಲ್ಲ. ಅದರಿಂದ ವೈರಾಗ್ಯವುಂಟಾಯಿತು. ಅವರು ಅಲ್ಲಿಯೇ ಜಪಮಾಡುವಂತೆ ’ಮರಾ’ ಎಂಬ ಮಂತ್ರೋಪದೇಶ ಮಾಡಿದರು.
’ಏಕಾಗ್ರಮನಸಾತ್ರೈವ ಮರೇತಿ ಜಪ ಸರ್ವದಾ’
ನಾನು ಹಾಗೆಯೇ ಮಾಡುತ್ತಿರಲು ನನ್ನಮೇಲೆ ಹುತ್ತ ಬೆಳೆಯಿತು. ವರ್ಷಗಳ ನಂತರ ಋಷಿಗಳು ಬಂದು ನನ್ನನ್ನು ಹೊರಬರುವಂತೆ ಕರೆದರು.
ವಲ್ಮೀಕಾನ್ನಿರ್ಗತಶ್ಚಾಹಂ ನೀಹಾರಾದಿವ ಭಾಸ್ಕರಃ |
ಮಾಮಪ್ಯಾಹುರ್ಮುನಿಗಣಾಃ ವಾಲ್ಮೀಕಿಸ್ತ್ವಂ ಮುನೀಶ್ವರಃ ||
ವಲ್ಮೀಕದಿಂದ ಹೊರಬಂದುದರಿಂದ ಮುಂದೆ ಈತ ವಾಲ್ಮೀಕಿಯೆಂದೇ ಹೆಸರಾದ. ಅಲ್ಲದೇ ವರುಣನು(ಪ್ರಚೇತ) ಮಳೆಯನ್ನು ಸುರಿಸಿ ಹುತ್ತವನ್ನು ಕರಿಗಿಸಿದ್ದರಿಂದ ಪ್ರಾಚೇತಸನೆಂಬ ಹೆಸರೂ ಬಂದಿತು. ಇದಕ್ಕೂ ಮೊದಲು ಆತನಿಗೆ ಯಾವ ಹೆಸರಿತ್ತೆಂಬುದು ರಾಮಾಯಣದಲ್ಲೆಲ್ಲೂ ಉಲ್ಲೇಖವಿಲ್ಲ.
ಇದೇ ಕಥೆಯು ಮುಂದೆ ಆನಂದ ರಾಮಾಯಣದಲ್ಲೂ ಇದೆ. ಇದಕ್ಕೆ ಪುಷ್ಟಿಕೊಡುವ ವಿಚಾರ ಮಹಾಭಾರತದ ಅನುಶಾಸನ ಪರ್ವದಲ್ಲೂ ಕಂಡುಬರುತ್ತದೆ. ಅಲ್ಲಿ ಯುಧಿಷ್ಠಿರನಿಗೆ ವಾಲ್ಮೀಕಿಯು ಹೇಳುತ್ತಾನೆ.
ವಾಲ್ಮೀಕಿಶ್ಚಾಹ ಭಗವಾನ್ ಯುಧಿಷ್ಠಿರಮಿದಂ ವಚಃ |
ವಿವಾದೇ ಸಾಗ್ನಿಮುನಿಭಿರ್ಬ್ರಹ್ಮಘ್ನೋ ವೈ ಭವಾನಿತಿ
ಉಕ್ತಃ ಕ್ಷಣೇನ ಚಾವಿಷ್ಟಸ್ತೇನಾಧರ್ಮೇಣ ಭಾರತ |
ಸೋಽಹಮೀಶಾನಮನಘಂ ಅಮೋಘಂ ಶರಣಂ ಗತಃ ||
ಮುಕ್ತಶ್ಚಾಸ್ಮಿತತೋ ಪಾಪೈಃ
"ಅಗ್ನಿಪೂಜಕರಾದ ಮುನಿಗಳೊಡನೆ ನಾನು ವಿವಾದ ಮಾಡಿದ್ದರಿಂದ ನೀನು ಬ್ರಹ್ಮಘ್ನನೆಂದುಬಿಟ್ಟರು. ಕೂಡಲೇ ನಾನು ಅಧರ್ಮಿಷ್ಟನಾದೆ. ಕಡೆಗೆ ಈಶ್ವರನನ್ನು ಶರಣುಹೋಗಿ ಪಾಪಮುಕ್ತನಾದೆ."
ಅಶ್ವಘೋಷನ ಬುದ್ಧಚರಿತ್ರೆಯಲ್ಲೂ ವಾಲ್ಮೀಕಿಯ ವೃತ್ತಾಂತವಿದೆ. ಅಲ್ಲಿ ವಾಲ್ಮೀಕಿಯನ್ನು ಚ್ಯವನ ಮಹರ್ಷಿಯ ಮಗನೆಂದಿದೆ.
’ವಾಲ್ಮೀಕಿರಾದೌ ಚ ಸಸರ್ಜ ಪದ್ಯಂ ಜಗ್ರಂಥಯನ್ನ ಚ್ಯವನೋ ಮಹರ್ಷಿಃ ’
ಈ ಚ್ಯವನನು ಭೃಗುವಿನ ಮಗ.
’ಭೃಗೋಮಹರ್ಷೇಃ ಪುತ್ರೋಽಭೂತ್ ಚ್ಯವನೋ ನಾಮ ಭಾರ್ಗವಃ’
ಭಾರ್ಗವನಾದ ವಾಲ್ಮೀಕಿಯೇ ರಾಮಚರಿತೆಯನ್ನು ಬರೆದವನೆಂದು ಶಾಂತಿಪರ್ವದಲ್ಲಿ ಸ್ಪಷ್ಟ ಉಲ್ಲೇಖವಿದೆ.
ಶ್ಲೋಕಶ್ಚಾಯಂ ಪುರಾಗೀತೋ ಭಾರ್ಗವೇನ ಮಹಾತ್ಮನಾ |
ಆಖ್ಯಾತೇ ರಾಮಚರಿತೇ ನೃಪಂತಿ ಪ್ರತಿ ಭಾರತ ||
ಸ್ವತಃ ರಾಮಾಯಣ, ಮಹಾಭಾರತಗಳಲ್ಲೇ ವಾಲ್ಮೀಕಿಯು ಬ್ರಾಹ್ಮಣನೆಂದಿದೆಯೇ ಹೊರತೂ ಬೇಡನೆಂದಲ್ಲ. ಆದರೆ ಕೆಲವು ಕಾಲ ಶೂದ್ರಾಚಾರ ನಿರತನಾಗಿದ್ದರೂ ಇರಬಹುದು.
ರಾಮಾಯಣದ ಹುಟ್ಟಿಗೆ ಕಾರಣವೆನಿಕೊಂಡ ’ಮಾನಿಷಾದ’ ಶ್ಲೋಕವನ್ನೇ ಗಮನಿಸಿ. ಇದು ಛಂದಸ್ಸಿನ ದೃಷ್ಟಿಯಿಂದ ನಿರ್ದುಷ್ಟವೆನಿಸಿದರೂ, ಅರ್ಥದ ದೃಷ್ಟಿಯಿಂದ ಅಪೂರ್ವ ಮಹತ್ವದ್ದೆಂದೇನೂ ಭಾಸವಾಗುವುದಿಲ್ಲ. ಕೆಲ ವ್ಯಾಖ್ಯಾನಕಾರರು ’ಮಾ’ ಎಂದರೆ ಲಕ್ಷ್ಮಿಯೆಂದೂ, ಮಾನಿಷಾದ ಎಂದರೆ ಲಕ್ಷ್ಮಿನಿವಾಸನಾದ ವಿಷ್ಣುವೆಂದೂ ಬಗೆಬಗೆಯ ಅರ್ಥಗಳನ್ನು ತೋರಿಸಿ ರಾಮಾಯಣಕ್ಕೆ ಮಂಗಳಶ್ಲೋಕವೆನಿಸುವ ಔಚಿತ್ಯ ಅದರಲ್ಲುಂಟೆಂದು ವಿವರಣೆ ನೀಡಿದ್ದಾರೆ. ಇದು ಪಂಡಿತರ ವ್ಯಾಖ್ಯಾನಕೌಶಲವೇ ಹೊರತೂ ಮತ್ತೇನೂ ಅಲ್ಲ. ಕ್ರೌಂಚ ಪಕ್ಷಿಯೊಂದನ್ನು ನಿಷಾದನೊಬ್ಬನು ಕೊಂದು ಕೆಡಹುತ್ತಾನೆ. ನೆಲಕ್ಕೆ ಬಿದ್ದು ಹೊರಳಾಡಿ ಸಾಯುತ್ತಿರುವ ಅದನ್ನು ಕಂಡ ವಾಲ್ಮೀಕಿಯ ಬಾಯಿಂದ ಹೊರಬಂದ ಶ್ಲೋಕವಿದು. ಪಕ್ಷಿಯನ್ನು ಕೊಂದದ್ದಕ್ಕಾಗಿ ವಾಲ್ಮೀಕಿ ನಿಷಾಧನನ್ನು ಶಪಿಸುತ್ತಾನೆ. ಬೇಟೆಯಾಡುವುದು ಬೇಡನ ಸಹಜ ಧರ್ಮ. ವಾಲ್ಮೀಕಿ ಮೂಲತಃ ಬೇಡನೇ ಆಗಿದ್ದಲ್ಲಿ ಹಕ್ಕಿಯನ್ನು ಕೊಂದವನೊಬ್ಬನನ್ನು ಹೀಗೆ ಶಪಿಸಲು ಸಾಧ್ಯವೇ ಇರುತ್ತಿರಲಿಲ್ಲ.
ರಾಜಸ್ಥಾನ, ಪಂಜಾಬ್, ಗುಜರಾತಿನಲ್ಲಿ ಬಹುಸಂಖ್ಯೆಯಲ್ಲಿರುವ ಈಗಿನ ವಾಲ್ಮೀಕಿ ಸಮುದಾಯದವರಿಗೆ ಆ ಹೆಸರು ಬ್ರಿಟಿಷರ ಕಾಲದಲ್ಲಿ ಹೇಗೆ ಬಂತೆಂಬ ವಿವರಣೆಗೆ ಪಂಡಿತ ಅಮಿತ್ಚಂದ ಶರ್ಮಾರ ’’ಬಾಲ್ಮೀಕಿ ಪ್ರಕಾಶ್’ ಎಂಬ ಹಿಂದಿ ಹೊತ್ತಿಗೆಯನ್ನು ಗಮನಿಸಿ.